ಐವರ್ನಾಡಿನಲ್ಲಿ ಸಿಹಿನೀರು ಮುತ್ತು ಕೃಷಿ ತರಬೇತಿ ಕಾರ್ಯಕ್ರಮ

0

ಪುತ್ತೂರು: ಐವರ್ನಾಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೀನು ಕೃಷಿಕರಿಗೆ ಸಿಹಿನೀರು ಮುತ್ತು ಕೃಷಿ ತರಬೇತಿ ಕಾರ್ಯಕ್ರಮ ನಡೆಸಲಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, PDO ಶ್ಯಾಮಪ್ರಸಾದ್ ಉಪಸ್ಥಿತರಿದ್ದರು.

ತರಬೇತುದಾರರಾಗಿ ಡಾ. ಸುಪ್ರೀತಾ ಬಿ ಯು ಮತ್ತು ಮೀನುಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಅಮೋಘ್ ಕೆ.ಆರ್ ಮತ್ತು ನವೀನ್‌ಚಂದ್ರ ಐವರ್ನಾಡುರವರು ಮಾಹಿತಿ ನೀಡಿದರು. ಮೀನುಗಾರಿಕೆ ಸಹಾಯಕ ನಿರ್ದೇಶಕಿ ಮಂಜುಳಾಶ್ರೀ ಶೆಣೈ ಕಾರ್ಯಕ್ರಮ ಆಯೋಜಿಸಿ ನಿರೂಪಿಸಿದರು. ನವೀನ್ ಚಂದ್ರ ಐವರ್ನಾಡುರವರ ತೋಟದ ಕ್ಷೇತ್ರ ಭೇಟಿ ಮಾಡಿ ಪ್ರಾಯೋಗಿಕವಾಗಿ ಮುತ್ತು ಕೃಷಿ ಮತ್ತು ಮೀನು ಕೃಷಿ ಬಗ್ಗೆ ಮಾಹಿತಿ ನೀಡಲಾಯಿತು.

LEAVE A REPLY

Please enter your comment!
Please enter your name here