ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮೋಹಿನಿ ಜಯಕರ್, ಉಪಾಧ್ಯಕ್ಷರಾಗಿ ಪದ್ಮನಾಭ ಸಪಲ್ಯ ಆಯ್ಕೆ

0

ವಿಟ್ಲ : ಇಡ್ಕಿದು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಕುಳ ಗ್ರಾಮದ ಮೋಹಿನಿ ಜಯಕರ್ ಅಧ್ಯಕ್ಷರಾಗಿ, ಇಡ್ಕಿದು ಗ್ರಾಮದ ಪದ್ಮನಾಭ ಸಪಲ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕು ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಪ್ರೀತಮ್ ರವರು ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು. ಮಾಜಿ ಅಧ್ಯಕ್ಷ ಎಂ.ಸುಧೀರ್ ಕುಮಾರ್‌ ಶೆಟ್ಟಿ, ಮಾಜಿ ಉಪಾಧ್ಯಕ್ಷೆ ಯಶೋಧ, ಸದಸ್ಯರಾದ ಚಿದಾನಂದ ಪೆಲತ್ತಿಂಜ, ಸಂಜೀವ, ಜಯಂತಿ, ಶೋಭ, ಪುಷ್ಪ, ಭಾಗೀರತಿ, ಪುರುಷೋತ್ತಮ, ಗೀತಾಂಜಲಿ, ತಿಲಕ್ ರಾಜ್ ಶೆಟ್ಟಿ, ಲಲಿತ, ಪ್ರಶಾಂತ್, ಹರಿಣಾಕ್ಷಿ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಮೊದಲಾದವರು ಉಪಸ್ಥಿತರಿದ್ದರು.

ಮಾಜಿ ಶಾಸಕರಾದ ಸಂಜೀವ ಮಠಂದೂರು, ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ‌ ಸಮಿತಿ ಅಧ್ಯಕ್ಷರಾದ ಸುರೇಶ್ ಕೆ.ಎಸ್. ಮುಕ್ಕುಡ, ಪಕ್ಷದ ಪ್ರಮುಖರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ರಮೇಶ್ ಭಟ್ ಮಿತ್ತೂರು, ಪ್ರಪುಲ್ ಚಂದ್ರ, ಪುಣಚ ಮಹಾಶಕ್ತೀ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್ ಯಾದವ್, ಮಂಡಲ ಪ್ರ.ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಪ್ರಧಾನಕಾರ್ಯದರ್ಶಿ ನಿತೀಶ್ ಶಾಂತಿವನ, ಹರೀಶ್ ಬಿಜತ್ರೆ ಮೊದಲಾದವರು ಆಗಮಿಸಿ ಶುಭಹಾರೈಸಿದರು.

LEAVE A REPLY

Please enter your comment!
Please enter your name here