ಆ. 11: ಬೆಟ್ಟಂಪಾಡಿಯಲ್ಲಿ ವಿದ್ಯಾಭಾರತಿ ಶಾಲೆಗಳ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

0

ಬೆಟ್ಟಂಪಾಡಿ: ವಿದ್ಯಾಭಾರತಿ ಕರ್ನಾಟಕ ದ.ಕ. ಜಿಲ್ಲೆ, ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬೆಟ್ಟಂಪಾಡಿ ಇವುಗಳ ಸಹಯೋಗದೊಂದಿಗೆ ವಿದ್ಯಾಭಾರತಿ ಶಾಲೆಗಳ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ ಆ. 11 ರಂದು ಬೆಟ್ಟಂಪಾಡಿ ಬಿಲ್ವಗಿರಿ ಕ್ರೀಡಾಂಗಣದಲ್ಲಿ ನಡೆಯಲಿದೆ.


ಉದ್ಘಾಟನಾ ಸಮಾರಂಭ
ಬೆಳಿಗ್ಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಸಭಾ ಕಾರ್ಯಕ್ರಮವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಉದ್ಘಾಟಿಸಲಿದ್ದಾರೆ. ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ ಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಅಭ್ಯಾಗತರಾಗಿ ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಸ್. ಸತೀಶ್ ಕುಮಾರ್, ದ.ಕ. ಜೇನು ಸಹಕಾರಿ ಸಂಘದ ಉಪಾಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ ಧನಂಜಯ ಬಿ.ಸಿ., ಕೃಷ್ಣಪ್ರಸಾದ್ ಆಳ್ವ, ಮುಂಡೂರು ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ, ಮಂಗಳೂರಿನ ಕಟಿಲೇಶ್ವರೀ ಲಾಜಿಸ್ಟಿಕ್ಸ್ ನ ಮ್ಹಾಲಕ ಜನಾರ್ದನ ಪೂಜಾರಿ ಪದಡ್ಕ, ಹಾಸನ ಸೆಲ್ಕೋ ಸೋಲಾರ್ ಲಿ. ನ ಏರಿಯಾ ಮ್ಯಾನೇಜರ್ ಪ್ರಸಾದ್ ಬಿ., ಆರ್ಲಪದವು ಶ್ರೀದುರ್ಗಾ ಹಾರ್ಡ್ ವೇರ್ ನ ಗೋಪಾಲಕೃಷ್ಣ ಭಟ್ ಕೆ, ವಿದ್ಯಾಭಾರತಿ ಜಿಲ್ಲಾ ಕ್ರೀಡಾ ಸಂಯೋಜಕ ಕರುಣಾಕರ ಎಂ.ಎಲ್. ಭಾಗವಹಿಸಲಿದ್ದಾರೆ.


ಸಮಾರೋಪ ಸಮಾರಂಭ
ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಬ್ರೈಟ್ ವೇ ಇಂಡಿಯಾ ಕನ್ಸಲ್ಟೆನ್ಸಿ & ಅಲೈಡ್ ಸರ್ವೀಸ್ ನ ಪಾಲುದಾರ ನಿರ್ದೇಶಕ ಮನಮೋಹನ ರೈ ಚೆಲ್ಯಡ್ಕ ವಹಿಸಲಿದ್ದಾರೆ. ನೋಟರಿ ವಕೀಲ ಚಿದಾನಂದ ಬೈಲಾಡಿ, ಪೊಲೀಸ್ ಇಲಾಖೆಯ ಶ್ರೀಹರಿ ಪಾಣಾಜೆ, ಬೆಂಗಳೂರಿನ ವೆಂಕಟೇಶ್ವರ ಪವರ್ ಸೊಲ್ಯೂಷನ್ಸ್ ನ ಆಡಳಿತ ನಿರ್ದೇಶಕ ಸತ್ಯ ಎನ್., ಎಂಫಾರ್ ಕನ್‌ಸ್ಟ್ರಕ್ಷನ್ ನ ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಸಂತೋಷ್ ಕುಮಾರ್ ಜಿ., ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ಸಂಚಾಲಕ ಬಾಲಕೃಷ್ಣ ಘಾಟೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here