ಐತ್ತೂರು: ಕೆಎಫ್‌ಡಿಸಿ ನಿವೃತ್ತ ನೌಕರ ಮೋನಪ್ಪ ಗೌಡ ಆತ್ಮಹತ್ಯೆ

0

ಕಡಬ: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಐತ್ತೂರು ಗ್ರಾಮದ ಕೇರ್ಪಡ ನಿವಾಸಿ, ಕೆಎಫ್‌ಡಿಸಿ ನಿವೃತ್ತ ನೌಕರ ಮೋನಪ್ಪ ಗೌಡ(56ವ.)ರವರು ಚಿಕಿತ್ಸೆಗೆ ಸ್ಪಂದಿಸದೆ ಆ.7ರಂದು ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೋನಪ್ಪ ಗೌಡರವರು ಅನಾರೋಗ್ಯದ ಹಿನ್ನೆಲೆಯಲ್ಲಿ 6 ವರ್ಷದ ಹಿಂದೆ ಕೆಎಸ್‌ಡಿಸಿ ಉದ್ಯೋಗ ಬಿಟ್ಟಿದ್ದರು. ಆ.6ರಂದು ಬೆಳಿಗ್ಗೆ ಮೈಲುತುತ್ತು ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು 108 ಆಂಬುಲೆನ್ಸ್‌ನಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು.

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಆ.7ರಂದು ರಾತ್ರಿ 1.45ರ ವೇಳೆಗೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಮೃತರ ಪುತ್ರ ಭವಿತ್ ನೀಡಿರುವ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here