ಪುತ್ತೂರು ಜ್ಯೂನಿಯರ್ ಕಾಲೇಜಿನಲ್ಲಿ 42 ವರ್ಷಗಳ ಹಿಂದೆ ಪ್ರಾಂಶುಪಾಲರಾಗಿದ್ದ ಪಿ.ವೆಂಕಟರಮಣ ನಿಧನ

0

ಪುತ್ತೂರು: ಪುತ್ತೂರು ಜ್ಯೂನಿಯರ್ ಕಾಲೇಜಿನಲ್ಲಿ 42 ವರ್ಷಗಳ ಹಿಂದೆ ಪ್ರಾಂಶುಪಾಲರಾಗಿದ್ದ ಬೆಳ್ತಂಗಡಿ ನಿವಾಸಿ ಪಿ.ವೆಂಕಟರಮಣ(84ವ)ರವರು ಆ.9ರಂದು ನಿಧನರಾದರು.


ಪುತ್ತೂರು ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ಅವರ ಅಣ್ಣ ಪಿ.ವೆಂಕಟರಮಣ ಅವರು ಸುಮಾರು 1980 -81ರಲ್ಲಿ ಪುತ್ತೂರು ಜ್ಯೂನಿಯರ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಚೇರಿಯಲಿ ವಿದ್ಯಾಧಿಕಾರಿಯಾಗಿ, ಜಿಲ್ಲಾ ಉಪನಿರ್ದೇಶಕರಾಗಿ, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ, ಜಂಟಿ ನಿರ್ದೇಶಕರಾಗಿ ಬಳಿಕ ಮಂಗಳೂರು ಸರಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಿವೃತ್ತಿ ಹೊಂದಿದ್ದರು. ಬಳಿಕದ ದಿನದಲ್ಲಿ ಬೆಳ್ತಂಗಡಿಯ ನವೋದಯ ಪ್ರೌಢಶಾಲೆಯಲ್ಲಿ ಮತ್ತು ಲಾಯಿಲ ಬಿ.ಇಡಿ ಕಾಲೇಜಿನಲ್ಲಿ ಗೌರವ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದರ ಜೊತೆಗೆ ಅವರು ಹ್ಯವಾಸಿ ಯಕ್ಷಗಾನ ಕಲಾವಿದರಾಗಿ ಅನೇಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಮೃತರು ಪತ್ನಿ ದಮಯಂತಿ, ಪುತ್ರರಾದ ಜಗದೀಶ್, ಕಿರಣ್ ಮತ್ತು ಪುತ್ರಿ ಉಷಾ ಹಾಗು ಸಹೋದರರಾದ ಪಿ.ಜಿ.ಚಂದ್ರಶೇಖರ್, ಪಿ.ಜಿ.ಜಗನ್ನಿವಾಸ ರಾವ್ ಮತ್ತು ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here