ಪುತ್ತೂರು: ವಾಹನ ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಪುತ್ತೂರು: ವಾಹನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಎರಡು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡ ಶಿವಮೊಗ್ಗದ ವ್ಯಕ್ತಿಯನ್ನು ಪುತ್ತೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ನಂಜಪ್ಪ ಲೇಔಟ್ ನ ಲೋಕೇಶ್ ಬಂಧಿತ ಆರೋಪಿ, ಅಪಘಾತ ಪ್ರಕರಣದಲ್ಲಿ ಆರೋಪಿ ವಿರುದ್ದ ಸೆಕ್ಷನ್ 279,338,304(A), IPC ಪ್ರಕರಣ ದಾಖಲಾಗಿತ್ತು. ಆರೋಪಿ ನ್ಯಾಯಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಆರೋಪಿಯನ್ನು ಶಿವಮೊಗ್ಗದಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ‌.

LEAVE A REPLY

Please enter your comment!
Please enter your name here