ಆ.11ಕ್ಕೆ ಕುಂಬಾರರ ಕುಶಲ ಕರ್ಮಿಗಳಿಗೆ ವಿದ್ಯುತ್ ಚಾಲಿತ ಕುಂಬಾರಿಕಾ ಚಕ್ರ, ಟೂಲ್ ಕಿಟ್ ವಿತರಣೆ

0

ಪುತ್ತೂರು: ಮಂಗಳೂರು ರಿಪೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಇವರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿಯಮಿತ ಪುತ್ತೂರು ಇವರ ಸಹಯೋಗದೊಂದಿಗೆ ಕುಂಬಾರ ಕುಶಲ ಕರ್ಮಿಗಳಿಗೆ ಸುಧಾರಿತ ವಿದ್ಯುತ್ ಚಾಲಿತ ಕುಂಬಾರಿಕಾ ಚಕ್ರ ಮತ್ತು ಟೂಲ್ ಕಿಟ್ ಗಳ ವಿತರಣೆ ಯು ಆ.11ರಂದು ಪುತ್ತೂರು ಲಯನ್ಸ್ ಕ್ಲಬ್ ಹಾಲ್‌ನಲ್ಲಿ ನಡೆಯಲಿದೆ.
ಮಂಗಳೂರು ರಿಪೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಇದರ ಡಿಜಿಯಂ ಹೆಚ್.ಆರ್ ಕೃಷ್ಣ ಹೆಗ್ಡೆ, ಮತ್ತು ರುಡಾಲ್ಫ್ ನೊರಾನ್ಹಾ, ಜನರಲ್ ಮ್ಯಾನೇಜರ್ ಕಾರ್ಪೋರೇಟ್ ಕಮ್ಯುನಿಕೇಷನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕ ಶಶಿ ಕುಮಾರ್ ಬಾಳ್ಯೊಟ್ಟು, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಂ ಪೆರುವಾಯಿ ಉಪಸ್ಥಿತರಿರಲಿದ್ದಾರೆ ಎಂದು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಜನಾರ್ದನ ಮೂಲ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here