ಕುಕ್ಕಾಜೆ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಜನ್ಮದಿನೋತ್ಸವದ ಹಿನ್ನೆಲೆ -ಪಕಳಕುಂಜ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

0

ವಿಟ್ಲ: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ಕೃಷ್ಣ ಗುರೂಜಿಯವರ ಜನ್ಮದಿನೋತ್ಸವದ ಪ್ರಯುಕ್ತ ಮಾಣಿಲ ಗ್ರಾಮದ ಪಕಳಕುಂಜ ವೇಣುಗೋಪಾಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ಕೃಷ್ಣ ಗುರೂಜಿಯವರ ಆಶೀರ್ವಚನ ನೀಡಿದರು.

ಶಾಲಾ ಶಿಕ್ಷಕ ರಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷೆ ನಿವೇದಿತಾ. ಕೆ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಮದನ್ ಮೋಹನ್ ಶೆಟ್ಟಿ ಯಸ್. ಪ್ರಸ್ತಾವಿಕವಾಗಿ ಮಾತುಗಳನ್ನಾಡಿದರು. ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ತಾರಿದಳ ಮುಖ್ಯ ಅತಿಥಿಯಾಗಿ ಆಗಮಿಸಿ ಶುಭಹಾರೈಸಿದರು. ಜ್ಞಾನ ದೀಪ ಶಿಕ್ಷಕಿ ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿಯರಾದ ದಯಾಮಣಿ ಹಾಗೂ ಭಾಗ್ಯಶ್ರೀ ಎರುಂಬು ಸಹಕರಿಸಿದರು.

LEAVE A REPLY

Please enter your comment!
Please enter your name here