ಕೊಯಿಲ: ಎಂಡೋ ಪಾಲನಾ ಕೇಂದ್ರಕ್ಕೆ ಭೇಟಿ

0

ರಾಮಕುಂಜ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ಇದರ ಸಿಬ್ಬಂದಿಗಳು ಮತ್ತು ವಿಶೇಷ ಚೇತನರ ಪುನರ್ವಸತಿ ಕಾರ್ಯಕರ್ತರು ಆ.11ರಂದು ಕೊಯಿಲದಲ್ಲಿರುವ ಎಂಡೋ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿದರು.


ಸಿಯೋನ್ ಆಶ್ರಮ ಟ್ರಸ್ಟ್‌ನ ವ್ಯವಸ್ಥಾಪಕ ಜಾಕ್ಸನ್ ಅವರು ಪುನರ್ವಸತಿ ಕೇಂದ್ರದಲ್ಲಿನ ಕರ್ತವ್ಯಗಳ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಮುತ್ತಪ್ಪ ಬಿ, ಮೋನಪ್ಪ ಬಿ, ಅತಿಕಮ್ಮ, ಚೇತನಾ, ಐಸಿಂತ ಪ್ರಜ್ವಲ್ ವೇಗಸ್ ಹಾಗೂ ಪಾಲನಾ ಕೇಂದ್ರದ ಸಿಬ್ಬಂದಿಗಳಾದ ರಜಿನ್, ನಮಿತಾ, ಶೈನಿ, ಯಶ್ವಿತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here