ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿ ನೇಮಕಕ್ಕೆ ಸಚಿವರಿಗೆ ಮನವಿ

0

ರಾಮಕುಂಜ: ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲದೆ ರೋಗಿಗಳು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಇಲ್ಲಿಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಕೊಯಿಲ, ರಾಮಕುಂಜದ ಕಾಂಗ್ರೆಸ್ ಮುಖಂಡರ ನಿಯೋಗ ಆರೋಗ್ಯ ಸಚಿವರೂ ಆಗಿರುವ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪುತ್ತೂರಿನಲ್ಲಿ ಮನವಿ ಮಾಡಿದೆ.


ಕೆಪಿಸಿಸಿ ಸದಸ್ಯ ಡಾ.ರಘು ಅವರ ಮುಖಾಂತರ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರ ಸಮ್ಮುಖದಲ್ಲಿ ಸಚಿವರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಸ್ಪಂದಿಸಿರುವ ಸಚಿವರು ವೈದ್ಯರ ನೇಮಕ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕೆಪಿಸಿಸಿ ಕಿಸಾನ್ ಸಮಿತಿ ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್ ಬಾನಡ್ಕ, ಕಾಂಗ್ರೆಸ್ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ದೊಡ್ಡ ಉರ್ಕ, ಬೂತ್ ಸಮಿತಿ ಅಧ್ಯಕ್ಷ ಫಾರೂಕ್ ಅಮೈ, ಜಗದೀಶ್ ಅಂಬ, ಕೃಷ್ಣ ಭಂಡಾರಿ, ಅಶ್ರಫ್ ಪಟ್ಟೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here