ಆ.14:ಪುತ್ತೂರಿನಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟ-ಪುತ್ತಿಲ ಪರಿವಾರದಿಂದ ಸೌಜನ್ಯ ತಾಯಿಗೆ ಆಮಂತ್ರಣ

0

ಪುತ್ತೂರು:ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಪುತ್ತೂರಿನಲ್ಲಿ ಆ.14ರಂದು ಪುತ್ತಿಲ ಪರಿವಾರದ ವತಿಯಿಂದ ನಡೆಯುವ ಪ್ರತಿಭಟನೆಗೆ ಸೌಜನ್ಯ ತಾಯಿ ಕುಸುಮಾವತಿಯವರನ್ನು ಪುತ್ತಿಲ ಪರಿವಾರದ ವತಿಯಿಂದ ಆ.11ರಂದು ಆಹ್ವಾನಿಸಲಾಯಿತು.


ಆರಂಭದಲ್ಲಿ ಸೌಜನ್ಯ ಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಕುಸುಮಾವತಿಯವರಿಗೆ ಮೊದಲ ಆಮಂತ್ರಣ ನೀಡಲಾಯಿತು.ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ ಅವರು ಕುಸುಮಾವತಿಯವರನ್ನು ಆಮಂತ್ರಿಸಿ ಮಾತನಾಡಿ,2013ರಲ್ಲೂ ಅರುಣ್ ಕುಮಾರ್ ಪುತ್ತಿಲರವರು ಹೋರಾಟ ನಡೆಸಿದ್ದಾರೆ.ಈಗ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಪುತ್ತೂರಿನಲ್ಲಿ ಹೋರಾಟ ನಡೆಸಲಿದ್ದೇವೆ.ಈ ಹೋರಾಟದ ಮೊದಲ ಆಮಂತ್ರಣ ನಿಮಗೆ ನೀಡಿ ಆಮಂತ್ರಿಸುತ್ತಿದ್ದೇವೆ ಎಂದರು.ಪುತ್ತಿಲ ಪರಿವಾರದ ನಗರ ಅಧ್ಯಕ್ಷ ಅನಿಲ್ ತೆಂಕಿಲ, ಮನೀಶ್ ಕುಲಾಲ್, ಶನ್ಮಿತ್ ರೈ, ಶರತ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here