ಬೆಳಂದೂರು ಗ್ರಾ.ಪಂ.- ಕೋಟಿ ವೃಕ್ಷ ಅಭಿಯಾನ, ವಸುಧಾ ವಂದನ್

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿಯ ಪಂಚ ಅಭಿಯಾನದಡಿ ಕೋಟಿ ವೃಕ್ಷ ಅಭಿಯಾನ ಹಾಗೂ ಆಜಾದಿ ಕಾ ಅಮೃತ ಮಹೋತ್ಸವದಡಿಯಲ್ಲಿ ವಸುಧಾ ವಂದನ್ ಕಾರ್ಯಕ್ರಮ ಬೆಳಂದೂರು ಸ. ಹಿ. ಪ್ರಾ. ಶಾಲೆಯಲ್ಲಿ ನಡೆಯಿತು. ಬೆಳಂದೂರು ಗ್ರಾ.ಪಂ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ,ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ, ಲೆಕ್ಕ ಸಹಾಯಕಿ ಸುನಂದ ಸದಸ್ಯರಾದ ವಿಠಲ ಗೌಡ ಅಗಳಿ, ಮೋಹನ್ ಅಗಳಿ, ಜಯರಾಮ ಬೆಳಂದೂರು, ಉಮೇಶ್ವರಿ ಅಗಳಿ, ಜಯಂತ ಅಬೀರ, ರವಿಕುಮಾರ್ ಕೆಡೆಂಜಿ, ಮಾದೋಡಿ, ಗೀತಾ ಕುವೆತ್ತೋಡಿ, ಹರಿಣಾಕ್ಷಿ ಬನಾರಿ, ಪಾರ್ವತಿ ಮರಕ್ಕಡ, ಕುಸುಮಾ ಅಂಕಜಾಲು, ತಾರಾ ಅನ್ಯಾಡಿ, ಬೆಳಂದೂರು ಶಾಲಾ ಮುಖ್ಯಗುರು ಜಾನಕಿ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಗೀತಾ, ಮಮತಾ, ಹರ್ಷಿತ್ ಕೂರ, ಸಂತೋಷ್ ಸಹಕರಿಸಿದರು.

LEAVE A REPLY

Please enter your comment!
Please enter your name here