ಕೊಯಿಲ: ಬೈಕ್ ಡಿಕ್ಕಿ-ಪಾದಚಾರಿ ಬಡಿಲ ಹುಸೈನ್‌ಗೆ ಗಾಯ

0


ರಾಮಕುಂಜ: ಬೈಕ್ ಡಿಕ್ಕಿಯಾಗಿ ಪಾದಚಾರಿ ಬಡಿಲ ಹುಸೈನ್ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಆ.11ರಂದು ಬೆಳಿಗ್ಗೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕೊಯಿಲದಲ್ಲಿ ರಸ್ತೆ ಎಡಬದಿಯ ಕಚ್ಚಾ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಡಿಲ ಹುಸೈನ್ ಅವರಿಗೆ ಉಪ್ಪಿನಂಗಡಿಯಿಂದ ಆಲಂಕಾರು ಕಡೆಗೆ ಹೋಗುತ್ತಿದ್ದ ಬೈಕ್( ಕೆಎ7, ಜೆ5121) ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ಪರಿಣಾಮ ಹುಸೈನ್‌ರವರು ಅಲ್ಲಿಯೇ ಕುಸಿದು ಬಿದ್ದಿದ್ದು ಸಾರ್ವಜನಿಕರು ಅವರನ್ನು ಉಚಪರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಕೊಯಿಲ ನಿವಾಸಿ ಮಹಮ್ಮದ್ ಖಲಂದರ್ ಎಂಬವರು ನೀಡಿದ ದೂರಿನಂತೆ ಕಡಬ ಪೊಲೀಸು ಠಾಣೆಯಲ್ಲಿ ಕಲಂ :279,337 IPC ಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here