13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ನಡೆಯಲಿರುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆಯು ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಭಜರಂಗದಳ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಡಿ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಉಪಾಧ್ಯಕ್ಷ ಸೇಶಪ್ಪ ಬೆಳ್ಳಿಪ್ಪಾಡಿ, ಜಗದೀಶ್ ಬನ್ನೂರು, ಪ್ರಖಂಡ ಕಾರ್ಯದರ್ಶಿ ಜಿತೇಶ್ ಬಲ್ನಾಡ್, ಸಹ ಕಾರ್ಯದರ್ಶಿ ರೂಪೇಶ್ ಮುರ, ಬಜರಂಗದಳ ಸಂಯೊಜಕ್ ಜಯಂತ್ ಕುಂಜೂರುಪಂಜ, ಗ್ರಾಮಾಂತರ ಪ್ರಖಂಡ ಸಂಯೋಜಕ್ ವಿಶಾಕ್ ಸಸಿಹಿತ್ಲು, ಸಹ ಸಂಯೋಜಕ್ ಕಿರಣ್ ರಾಮಕುಂಜ, ಗ್ರಾಮಾಂತರ ಪ್ರಖಂಡ ಸಹ ಸಂಯೋಜಕ್ ಅನಿಲ್ ಇರ್ದೆ, ನಗರ ಪ್ರಖಂಡ ಸಾಪ್ತಾಹಿಕ್ ಮಿಲನ್ ಪ್ರಮುಖ್ ಧನರಾಜ್ ಬೆಳ್ಳಿಪ್ಪಾಡಿ, ಗ್ರಾಮಾಂತರ ಪ್ರಖಂಡ ಸಾಪ್ತಾಹಿಕ್ ಮಿಲನ್ ಪ್ರಮುಖ್ ಪ್ರಜ್ವಲ್ ಸಂಪ್ಯ, ನಗರ ಪ್ರಖಂಡ ಸುರಕ್ಷಾ ಪ್ರಮುಖ್ ಸಂಜಯ್ ಬನಾರಿ, ಅಖಾಡ ಪ್ರಮುಖ್ ಹರ್ಷಿತ್ ಬಲ್ನಾಡ್, ಪ್ರಮುಖರಾದ ಚಂದ್ರನಾಥ ಮುಕ್ವೆ, ಗುರುರಾಜ್ ಬಲ್ನಾಡ್, ಧನೇಶ್ ಉರ್ಲಾಂಡಿ, ರವಿ ಪುಣಚ, ಅರುಣ್ ಬಲ್ನಾಡ್, ತಿಲಕ್ ನೆಲಪ್ಪಾಲು, ಯಕ್ಷಿತ್ ಬಲ್ನಾಡ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here