ಪುಣಚ ಗ್ರಾಮ ವಿಕಾಸ ಸಮಿತಿ ಮತ್ತು ಕೇಪು ಗ್ರಾಮ ಸಮಿತಿಗಳ ಆಶ್ರಯದಲ್ಲಿ ಉಚಿತ ನಾಡಿ ಪರೀಕ್ಷೆ, ಆರೋಗ್ಯ ತಪಾಸಣೆ

0

ಪುಣಚ: ಗ್ರಾಮ ವಿಕಾಸ ಸಮಿತಿ ಪುಣಚ ಮತ್ತು ಕೇಪು ಗ್ರಾಮಗಳ ಜಂಟಿ ಆಶ್ರಯದಲ್ಲಿ ಉಚಿತ ನಾಡಿ ಪರೀಕ್ಷೆ ಹಾಗೂ ಆರೋಗ್ಯ ತಪಾಸಣಾ ಶಿಬಿರವು ಪುಣಚ ಪರಿಯಾಲ್ತಡ್ಕ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.13 ರಂದು ನಡೆಯಿತು.

ದೀಪ ಬೆಳಗಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮ ಚಾಲನೆಗೊಂಡಿತು. ಗೋವಿನತೋಟ ರಾಧಾ ಸುರಭಿ ಗೋ ಮಂದಿರದ ಭಕ್ತಿ ಭೂಷಣ್ ಜಿ. ಮಾತನಾಡಿ ನಾಡಿಪರೀಕ್ಷೆ, ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿಟ್ಲ ರೋಟರಿ ಅಧ್ಯಕ್ಷ ಕಿರಣ್ ಕುಮಾರ್, ಮಂಗಳೂರಿನ ವಿನಯ ರಾಘವೇಂದ್ರ, ಸತೀಶ್ ಮುಲ್ಕಿ, ಗುರುಪುರ ಕೈಕಂಬದ ಮನೋಜಿತ್, ಪುಣಚ ಗ್ರಾಮ ವಿಕಾಸ ಕೇಂದ್ರ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಪರಿಯಾಲು ವೇದಿಕೆಯಲ್ಲಿ ಉಪಸ್ಥತರಿದ್ದರು. ಹಲವಾರು ಮಂದಿ ನಾಡಿ ಪರೀಕ್ಷೆ ಹಾಗೂ ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಗೊಂಡರು. ಪಂಚಗವ್ಯ ಆಯುರ್ವೇದ ಔಷಧಿಗಳ ಹಾಗೂ ಗವ್ಯೋತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ನಡೆಯಿತು. ಪುಣಚ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಸ್ವಾಗತಿಸಿ, ವಾಣಿಶ್ರೀ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಗೈದರು.

LEAVE A REPLY

Please enter your comment!
Please enter your name here