ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿರುವ ಅಬೂಬಕ್ಕರ್ ಮುಲಾರ್ ಅವರಿಗೆ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ವತಿಯಿಂದ ಬೀಳ್ಕೊಡುಗೆ

0

ಪುತ್ತೂರು:ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸದಸ್ಯರಾಗಿದ್ದು, ಕುಟುಂಬದ ಜೊತೆ ಉಮ್ರಾ ಧಾರ್ಮಿಕ ಪ್ರವಾಸ ಕೈಗೊಳ್ಳಲಿರುವ ಅಬೂಬಕ್ಕರ್ ಮುಲಾರ್ ಇವರನ್ನು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಂಸ್ಥೆಯಿಂದ ಆ.12ರಂದು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಅಧ್ಯಕ್ಷ ಎನ್. ರವೀಂದ್ರ ಪೈ ಅವರನ್ನು ಗೌರವಿಸಿ ಶುಭ ಹಾರೈಸಿದರು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ, ಪ್ರಸ್ತುತ ಪ್ರಾಂತೀಯ ಅಧ್ಯಕ್ಷರಾಗಿರುವ ಲ್ಯಾನ್ಸಿ ಮಸ್ಕರೇನಸ್ ಸಂದರ್ಭೋಚಿತವಾಗಿ ಮಾತನಾಡಿದರು. ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಕೇಶವ ಪೂಜಾರಿ ಬೆದ್ರಾಳ, ರವಿಪ್ರಸಾದ್ ಶೆಟ್ಟಿ, ವತ್ಸಲಾ ಪದ್ಮನಾಭ ಶೆಟ್ಟಿ, ಚಂದ್ರಶೇಖರ ಪಿ, ಮಂಜುನಾಥ ಎಮ್, ಸುಮಿತ್ರಾ, ರೋಶನ್ ಡಾಯಸ್, ಭಾಸ್ಕರ ಸುವರ್ಣ, ಕೋಶಾಧಿಕಾರಿ ಮೊಹಮ್ಮದ್ ಹನೀಫ್, ಲಿಯೋ ಕ್ಲಬ್ ಅಧ್ಯಕ್ಷೆ ಲೆರಿಸ್ಸಾ ಪ್ರಿನ್ಸಿ ಮಸ್ಕರೇನಸ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಮೋಹನ್ ನಾಯಕ್ ವಂದಿಸಿದರು.

LEAVE A REPLY

Please enter your comment!
Please enter your name here