ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

0

ಪುತ್ತೂರು: ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳ ಸ್ಥಾನಕ್ಕೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಹಾಗೂ ಹಿಂದುಳಿದ ವರ್ಗ ಕ್ಷೇತ್ರಕ್ಕೆ ಮೀಸಲಿಸಿದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ನಾರಾಯಣ ಆರ್.ಸಿ, ವಸಂತ ಪೂಜಾರಿ,ನಾರಾಯಣ ಪೂಜಾರಿ.ಕೆ,ಧನಂಜಯ ಪೂಜಾರಿ.ಪಿ, ನಿತೀಶ್ ಕುಮಾರ್ ಶಾಂತಿವನ, ತ್ರಿವೇಣಿ ಪಲ್ಲತ್ತಾರು,ಸುಷ್ಮಾ ಕುಮಾರಿ,ವಿಜಯ ಪೂಜಾರಿ, ರಾಮಣ್ಣ ಪೂಜಾರಿ,ಚೆನ್ನಪ್ಪ ಪೂಜಾರಿ ಅವರುಗಳು ಆಯ್ಕೆಯಾಗಿದ್ದಾರೆ. ಸಂಘದ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರುಗಳಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾ ರಿಟರ್ನಿಂಗ್ ಅಧಿಕಾರಿ ಶೋಭಾ ಎನ್.ಎಸ್‌ರವರು ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here