ಗಾಂಧೀ ಕಟ್ಟೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಬಸ್ ನಿಲ್ದಾಣದ ಬಳಿಯಿರುವ ಗಾಂಧೀ ಕಟ್ಟೆಯಲ್ಲಿ ಆ.15ರಂದು ದೇಶದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಹಾರಾರ್ಪಣೆ ಮಾಡುವ ಮೂಲಕ ಆಚರಿಸಿದರು.


ಶಾಸಕ ಅಶೋಕ್ ಕುಮಾರ್ ರೈಯವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶಿಲ್ದಾರ್ ಜೆ.ಶಿವಶಂಕರ್, ನಗರ ಸಭಾ ಪೌರಾಯುಕ್ತ ಮಧು ಎಸ್ ಮನೋಹರ್, ಗಾಂಧೀಕಟ್ಟೆ ಸಮಿತಿಯ ಸಯ್ಯದ್ ಕಮಲ್, ಸೀತಾರಾಮ ಶೆಟ್ಟಿ ಬನ್ನೂರು, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಉಲ್ಲಾಸ್ ಪೈ, ಲ್ಯಾನ್ಸಿಮಸ್ಕರೇನಸ್, ಸೀತಾ ಭಟ್, ಅಸ್ಮಾಗಟ್ಟಮನೆ, ದಾಮೋದರ ಭಂಡಾರ್ ಕರ್ ಸಹಿತ ಹಲವು ಮಂದಿ ಉಪಸ್ಥಿತರಿದ್ದರು. ಗಾಂಧೀಕಟ್ಟೆ ಸಮಿತಿ ಸಂಚಾಲಕ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ನ್ಯಾಯವಾದಿ ಸಾಹಿರಾ ಝುಬೈರ್ ವಂದಿಸಿದರು.

LEAVE A REPLY

Please enter your comment!
Please enter your name here