ಕಡಬ: ಅನಾರೋಗ್ಯದಿಂದ ಯುವಕ ನಿಧನ

0

ಕಡಬ: ಕಡಬ ಗ್ರಾಮದ ಪಿಜಕ್ಕಳ ಪೊಯ್ಯೆತ್ತಡ್ಡ ನಿವಾಸಿ ಸುಂದರ ಗೌಡರವರ ಪುತ್ರ ರಾಜೇಶ್(30ವ.)ರವರು ಅಲ್ಪಕಾಲದ ಅಸೌಖ್ಯದಿಂದ ಆ.14ರಂದು ಸಂಜೆ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ನಿಧನರಾದರು.


ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ರಾಜೇಶ್ ಅವರು ಅಲ್ಲಿಯೇ ಅನಾರೋಗ್ಯಕ್ಕೆ ಒಳಗಾಗಿದ್ದರು. ಮನೆಯವರು ಅಲ್ಲಿಂದ ಕರೆತಂದು ಆ.13ರಂದು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಆ.14ರಂದು ಸಂಜೆ ನಿಧನರಾಗಿದ್ದಾರೆ. ಮೃತರು ತಂದೆ ಸುಂದರ ಗೌಡ, ಸಹೋದರ ಯಕ್ಷಗಾನ ಕಲಾವಿದ ಯೋಗೀಶ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here