ವಿದ್ಯಾರಶ್ಮಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಪುತ್ತೂರು:ವಿದ್ಯಾರಶ್ಮಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಸಂಚಾಲಕ ಸವಣೂರು ಸೀತಾರಾಮ ರೈಯವರು ಮಾತನಾಡಿ ಇತಿಹಾಸವನ್ನು ನೆನಪಿಡಬೇಕಾದುದು ನಮ್ಮ ಕರ್ತವ್ಯ ಎಂದು ಹೇಳಿ ಸ್ವಾತಂತ್ರ್ಯದ ಅರ್ಥವನ್ನು ತಿಳಿದುಕೊಂಡು ನಾವು ಜೀವನ ಮಾಡಬೇಕು ಎಂದು ಕರೆಕೊಟ್ಟರು.

ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲರುಗಳಾದ ಸೀತಾರಾಮ ಕೇವಳ ಮತ್ತು ಡಾ. ನಾರಾಯಣ ಮೂರ್ತಿ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಶಾಲಾ ಕ್ಯಾಪ್ಟನ್ ದೀಪಕ್ ಕಾರ್ಯಕ್ರಮ ನಿರ್ವಹಣೆ, ಆಯಿಷತ್ ವಫಾ ಸ್ವಾಗತ, ಶಿಫಾಲಿ ರೈ ಧನ್ಯವಾದ ಸಮರ್ಪಣೆಗಳಲ್ಲಿ ಸಹಕರಿಸಿದರು. ಕೊನೆಯಲ್ಲಿ ಮಕ್ಕಳಿಂದ ಮನರಂಜನಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here