ಅಮರಗಿರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಈಶ್ವರಮಂಗಲ: ಅಮರಗಿರಿಯಲ್ಲಿ ಗಜಾನನ ವಿದ್ಯಾಸಂಸ್ಥೆಯ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಯಿತು. ಅಮರಗಿರಿಯಲ್ಲಿರುವ ಸೈನಿಕರ ಪುತ್ತಳಿಯ ಕೈಗೆ ನಿವೃತ್ತ ಸೈನಿಕ ಸುಬ್ಬಪ್ಪ ಪಟ್ಟೆ ಇವರು ಧ್ವಜವನ್ನು ಇಡುವ ಮೂಲಕ ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಸುಬ್ಬಪ್ಪ ಪಟ್ಟೆ ಪ್ರವೀಣ್ ನೀರಳಿಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ನನ್ಯ ಅಚ್ಚುತ್ತ ಮೂಡೆತ್ತಾಯ ,ಶಿವರಾಂ ಶರ್ಮ, ನಾಗರಾಜ್ ನಡುವಡ್ಕ, ನಾಗಪ್ಪ ಗೌಡ ಬೊಮ್ಮಟ್ಟಿ ,ದೀಪಕ್, ಗಜಾನನ ಶಾಲಾ ಮಕ್ಕಳು, ಶಿಕ್ಷಕ ವೃಂದ, ಇತರರು ಭಾಗಿಯಾಗಿದ್ದರು. ಕ್ಷೇತ್ರದ ಧರ್ಮದರ್ಶಿಗಳಾದ ಶಿವರಾಂ.ಪಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here