ನೆಟ್ಟಣಿಗೆಮುಡ್ನೂರು ವಲಯದ ಬೆದ್ರಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ನೆಟ್ಟಣಿಗೆಮುಡ್ನೂರು ವಲಯದ ಬೆದ್ರಾಡಿ ಅಂಗನವಾಡಿ ಕೇಂದ್ರದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಜರುಗಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ಮೇಲ್ವಿಚಾರಕಿ ಸರೋಜಿನಿ ಯವರು ನೆರವೇರಿಸಿ, ಮಕ್ಕಳ ವೇಷಭೂಷಣದ ಮೆರವಣಿಗೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸದ ಅಧ್ಯಕ್ಷೆ ರೀತಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯ ಶ್ರೀರಾಮ ಪಕ್ಕಳ ಇವರು ಕೇಂದ್ರದಲ್ಲಿನ ಕಾರ್ಯಕ್ರಮ, ಪ್ರಗತಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಪಂಚಾಯತ್ ಸದಸ್ಯರಾದ ಪ್ರಫುಲ್ಲ ,ನಿವೃತ್ತ ಮೇಲ್ವಿಚಾರಕಿ ಸರೋಜಿನಿ ಮತ್ತು ಲಕ್ಷ್ಮಣ ಗೌಡ ಉಪಸ್ಥಿತರಿದ್ದರು. ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿಯವರು ,ಊರಿನ ಎಲ್ಲಾ ನಾಗರೀಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೇಂದ್ರದ ಕಾರ್ಯಕರ್ತೆ ಸೌಮ್ಯ ಎ ಸ್ವಾಗತಿಸಿ, ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ಯಶೋಧ ಸಹಕರಿಸಿದರು.

LEAVE A REPLY

Please enter your comment!
Please enter your name here