ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.ನಿಕಟಪೂರ್ವ ಅಧ್ಯಕ್ಷೆ ಗೀತಾ.ಡಿ, ಸದಸ್ಯರಾದ ಅವಿನಾಶ್ ರೈ, ಸತೀಶ್ ಶೆಟ್ಟಿ, ಬಾಲಚಂದ್ರ. ಕೆ, ಗ್ರೆಟಾ ಡಿ’ ಸೋಜಾ, ಸಿಬ್ಬಂದಿಗಳಾದ ಸಂಶೀನಾ, ವಿನೀತ್ ಕುಮಾರ್, ಸಂಜೀವಿನಿ ಒಕ್ಕೂಟದ ಭವ್ಯಾ ಸಿ.ಎಚ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಪಿಡಿಒ ಸಂಧ್ಯಾಲಕ್ಷ್ಮಿ ಸ್ವಾಗತಿಸಿ ವಂದಿಸಿದರು.

ನಂತರ ಅಜಾದಿಕಾ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮದಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡ ನೆಟ್ಟು ಅಮೃತ  ವಾಟಿಕ ಅಭಿವೃದ್ಧಿ ಪಡಿಸಲು ವಸುಧ ವಂದನ್ ಕಾರ್ಯಕ್ರಮಕ್ಕೆ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಚಾಲನೆ ನೀಡಿದರು.

LEAVE A REPLY

Please enter your comment!
Please enter your name here