ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ ವಹಿಸಿದ್ದರು. ಶ್ರೀಧರ ರೈ ಮಾದೋಡಿ ಧ್ವಜಾರೋಹಣ ನೆರವೇರಿಸಿದರು. ಆಡಳಿತಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ವಿನಯ ವಿ ಶೆಟ್ಟಿ ಸ್ವಾಗತಿಸಿದರು.

ಮುಖ್ಯಶಿಕ್ಷಕಿ ಸರಸ್ವತಿ ಎಂ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ ಎಂ ಬಿ, ಚಾರ್ವಾಕ ಹಾ. ಉ. ಸ. ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿಯರು ಪ್ರಾರ್ಥಿಸಿದರು. ಶಿಕ್ಷಕಿ ಅನಿತಾ ಜೆ ರೈ ವಂದಿಸಿದರು. ಮಾನಸ ಕೆ ವಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಕಾಣಿಯೂರು ಮುಖ್ಯರಸ್ತೆ ಮೂಲಕ ಅದ್ದೂರಿ ಮೆರವಣಿಗೆ ನಡೆಯಿತು.
ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here