ಸರ್ವೆ ಕಲ್ಪಣೆ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯದ ಸಂದೇಶ ಭಾಷಣ ಮಾಡಿದರು. ಶಾಲಾ ಮುಖ್ಯ ಶಿಕ್ಷಕಿ ಕಮಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಡೂರು ಗ್ರಾ.ಪಂ ಸದಸ್ಯರಾದ ಕರುಣಾಕರ ಗೌಡ ಎಲಿಯ, ರಾಧಾಕೃಷ್ಣ ರೈ ರೆಂಜಲಾಡಿ, ಪತ್ರಕರ್ತ ಯೂಸುಫ್ ರೆಂಜಲಾಡಿ ಸಮಯೋಚಿತವಾಗಿ ಮಾತನಾಡಿದರು. ಗ್ರಾ.ಪಂ ಸದಸ್ಯರಾದ ಮಹಮ್ಮದ್ ಆಲಿ, ರಸಿಕಾ ರೈ, ಕಮಲ, ರೆಂಜಲಾಡಿ ಅಂಗನವಾಡಿ ಶಿಕ್ಷಕಿ ಪುಷ್ಪಾವತಿ ಹಾಗೂ ಪೋಷಕರು, ಊರವರು ಉಪಸ್ಥಿತರಿದ್ದರು. ವಿವಿಧ ಸಂಘ ಸಂಸ್ಥೆಯವರು ಸಿಹಿತಿಂಡಿ ವಿತರಿಸಿದರು.


ಆದರ್ಶ ಸೇವಾ ಸಂಘ, ಸ್ಪೋರ್ಟಿಂಗ್ ರೆಂಜಲಾಡಿ, ಸ್ವಸ್ತಿಕ್ ಗೆಳೆಯರ ಬಳಗ ನೆಕ್ಕಿಲು, ಆದಿ ಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ಕಲ್ಪಣೆ, ಜೈ ಹನುಮಾನ್ ಫ್ರೆಂಡ್ಸ್ ರೆಂಜಲಾಡಿ-ಕಲ್ಪಣೆ, ಸೌಹಾರ್ದ ವೇದಿಕೆ ಸರ್ವೆ, ಬ್ಲಾಸ್ಟರ್‍ಸ್ ಕೂಡುರಸ್ತೆ ಮೊದಲಾದ ಸಂಘ ಸಂಸ್ಥೆ ಪದಾಧಿಕಾರಿಗಳು ಸಹಕರಿಸಿದರು. ವಿದ್ಯಾರ್ಥಗಳ ಪಥ ಸಂಚಲನ ಗಮನ ಸೆಳೆಯಿತು. ವಿದ್ಯಾರ್ಥಿಗಳು ಭಾಷಣ ಮಾಡಿದರು.

ಶಿಕ್ಷಕಿ ಅನಿತಾ ವಂದಿಸಿದರು. ಶಿಕ್ಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಸತೀಶ್, ಶಿಕ್ಷಕಿಯರಾದ ಉಮಾವತಿ, ಅವಿತಾ ಸಹಕರಿಸಿದರು.

LEAVE A REPLY

Please enter your comment!
Please enter your name here