ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಧ್ಯಕ್ಷ ಜಯರಾಮ ಕೆದಿಲಾಯ ಶಿಬರ ದ್ವಜಾರೋಹಣ ಮಾಡಿ ಮಾತನಾಡುತ್ತಾ ಜಾತಿ ಮತಕ್ಕೆ ಹೆಚ್ಚಿನ ಗಮನ ಕೊಡದೆ ದೇಶದ ಒಳಿತಿಗೆ ಹೆಚ್ಚಿನ ಗಮನವಿಟ್ಟಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಶಾಲಾ ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಕೆದಿಲ ಮಾತನಾಡಿ ಇತಿಹಾಸದ ಘಟನೆಯನ್ನು ನೆನಪಿಸುತ್ತಾ ಮಕ್ಕಳಿಗೆ ಬ್ರಿಟಿಷರ ಆಡಳಿತವನ್ನು ಮತ್ತು ಸ್ವಾತಂತ್ರ ಹೋರಾಟಗಾರರ ನಾಯಕರುಗಳನ್ನು ನೆನಪಿಸಿದರು.

ಶಾಲಾ ಸಂಚಾಲಕ ಭಾಸ್ಕರ ಆಚಾರ್ ಮಾತನಾಡಿ ಇನ್ನೊಬ್ಬರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿ,ಪ್ರಾಮಾಣಿಕ ಸೇವೆ, ಇನ್ನೊಬ್ಬರಿಗೆ ಅನ್ಯಾಯ ಮಾಡದೇ ಬದುಕುವುದು ಹಾಗೂ ಸಾಮೂಹಿಕ ಗೆಳೆತನದಿಂದ ಒಳ್ಳೆಯ ಕೆಲಸ ಮಾಡಿ ದೇಶವನ್ನು ಅಭಿವೃದ್ಧಿ ಪಡಿಸುವುದೆ ನಿಜವಾದ ದೇಶಪ್ರೇಮ ಎಂದರು.

ನಂತರ ಸ್ವಾತಂತ್ರ ದಿನಾಚರಣೆಯಲ್ಲಿ ಏರ್ಪಡಿಸಿದ್ದ ಇವಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹಾಗೂ ಈಜು ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ 200 meter free style ನಲ್ಲಿ ಪ್ರಥಮ, 200 meter individual medely ದ್ವಿತೀಯ ಹಾಗೂ 50 meter back stroke ನಲ್ಲಿ ದ್ವಿತೀಯ ಸ್ಥಾನ ಗಳಿಸಿದ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಅಮನ್ ರಾಜ್ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ದೇಶದ ಐತಿಹಾಸಿಕ ಘಟನೆಗಳನ್ನು ನೆನಪಿಸುವಂತಹ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಜಯಮಾಲಾ ವಿ ಎನ್ ರವರು ಎಲ್ಲರನ್ನು ಆದರದಿಂದ ಸ್ವಾಗತಿಸಿದರು. ಶಿಕ್ಷಕಿ ಸೌಮ್ಯ ರವರು ವಂದಿಸಿದರು.

LEAVE A REPLY

Please enter your comment!
Please enter your name here