ಶಾಂತಿನಗರ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ಸರ್ಕಾರಿ ಹಿ.ಪ್ರಾ.ಶಾಲೆ ಶಾಂತಿನಗರ-ಗೊಳಿತ್ತೊಟ್ಟು ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗುರುಂಪು ಅವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಗುರು ಗಣಪಯ್ಯ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಶಾಲಪ್ಪ ನೂಜೋಲು, ಆದರ್ಶ ಯುವಕ ಮಂಡಲದ ಅಧ್ಯಕ್ಷ ಜಯಂತ ಅರ್ತಿಗುಳಿ, ಶಾಲಾ ಹಿತೈಷಿಗಳಾದ ಅಶ್ರಫ್ ನೂಜೋಳು, ದೇವಪ್ಪ ಗೌಡ ಮುರಿಯೇಲು, ಪ್ರಸಾದ್ ಶಾಂತಿನಗರ, ಎಸ್‌ಡಿಎಂಸಿ ಉಪಾಧ್ಯಕ್ಷೆ ಮೀನಾಕ್ಷಿ ಬಾಂಕೋಡಿ ಅತಿಥಿಗಳಾಗಿ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪ್ರದೀಪ್ ಬಾಕಿಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಹಶಿಕ್ಷಕಿ ಪ್ರಮೀಳಾ ವಂದಿಸಿದರು. ಶಿಕ್ಷಕ ಮಂಜುನಾಥ ಮಣಕವಾಡ ಕಾರ್ಯಕ್ರಮ ನಿರೂಪಿಸಿದರು. ಶಾಂತಿನಗರ ಪೇಟೆಯ ತನಕ ಮೆರವಣಿಗೆ ನಡೆಸಲಾಯಿತು. ವಿದ್ಯಾರ್ಥಿಗಳಿಂದ ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here