ನಾಳೆ (ಆ.16) ಸನ್ಯಾಸಿಗುಡ್ಡೆಯಲ್ಲಿ ಜಾನುವಾರುಗಳ ಜಂತುಹುಳು ನಿವಾರಣಾ ಶಿಬಿರ – ವನಮಹೋತ್ಸವ

0

ಪುತ್ತೂರು: ಬ್ಯಾಂಕ್ ಆಫ್ ಬರೋಡಾ ಪ್ರಾಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾ‌ನ ಕೆದಂಬಾಡಿ ಗ್ರಾಮ ಸಮಿತಿ, ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇವುಗಳ ಆಶ್ರಯದಲ್ಲಿ ಜಾನುವಾರು ಜಂತುಹುಳು ನಿವಾರಣಾ ಶಿಬಿರ ಮತ್ತು ವನಮಹೋತ್ಸವ ಸನ್ಯಾಸಿಗುಡ್ಡೆ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರದಲ್ಲಿ ಆ.16 ರಂದು ನಡೆಯಲಿದೆ.
ವಿಆರ್‌ಡಿಎಫ್ ಆಡಳಿತ ಮಂಡಳಿ ಸದಸ್ಯ ಕಡಮಜಲು ಸುಭಾಸ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಮಹಿಳಾ ಸಂಘದ ಅಧ್ಯಕ್ಷೆ ವೀಣಾ ಆರ್. ರೈ ಬೆದ್ರುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಆರ್‌ಡಿಎಫ್ ಮಂಗಳೂರು ಇದರ ಕಾರ್ಯನಿರ್ವಹಣಾಧಿಕಾರಿ ಸಚಿನ್ ಹೆಗ್ಡೆ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ ಅಮಿತಾ ವಿ. ರೈ ಕೋರಂಗ ಮಾಹಿತಿ ನೀಡಲಿದ್ದಾರೆ ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕೆದಂಬಾಡಿ ಗ್ರಾಮ ಸಮಿತಿ ಅಧ್ಯಕ್ಷ ವಿಜಯ ಕುಮಾರ್ ರೈ ಕೋರಂಗ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here