ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗೌರವಾರ್ಪಣೆ

0

ಪುತ್ತೂರು: ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಾಲಾ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ರೇವತಿರವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಅಧ್ಯಕ್ಷ ತೀರ್ಥಾನಂದ ದುಗ್ಗಳ ಸಭಾಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಂಸ್ಥಾಪಕರ ಭಾವಚಿತ್ರವನ್ನು ಅನಾವರಣ ಗೊಳಿಸಿ ಪುಷ್ಪ ಸಮರ್ಪಿಸಿ ಭಾರತ ಮಾತೆಗೆ ಪುಷ್ಪಾರ್ಚನೆ ನೆರವೇರಿಸಿ ಕಾರ್ಯಕ್ರಮಕ್ಕೆ ಗುಣವತಿ ಎಸ್ ಭಟ್ ಇವರು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಶಿವರಾಮ ಭಟ್ ಬೀರ್ಣಕಜೆ, ಕೋಶಾಧಿಕಾರಿ ದಿವಾಕರ ರೈ ಕೆರೆಮೂಲೆ, ನಿವೃತ್ತ ಶಿಕ್ಷಕರಾದ ವಿಷ್ಣು ಮೂರ್ತಿ ನೆಕ್ಕರೆ,ಮಾಜಿ ಸಂಚಾಲಕ ಸೀತಾರಾಮ ಕೆ ಅಮಲ, ಮುಖ್ಯ ಗುರು ಕೃಷ್ಣವೇಣಿರವರುಗಳು ಶುಭ ಹಾರೈಸಿದರು. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಶೇಕಡ ನೂರು ಫಲಿತಾಂಶಕ್ಕೆ ಕಾರಣರಾದ ಎಲ್ಲಾ ಶಿಕ್ಷಕ ವೃಂದದವರನ್ನು ಆಡಳಿತ ಸಮಿತಿಯವರು ಗೌರವಿಸಿದರು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದಿವಾಕರ ರೈ ಕೆರೆಮೂಲೆ ಸ್ವಾಗತಿಸಿ, ಕೃಷ್ಣವೇಣಿ ವಂದಿಸಿದರು. ಶಿಕ್ಷಕಿ ಸುಪರ್ಣಾ ಕಾರ್ಯಕ್ರಮ ನಿರೂಪಿಸಿದರು. ಆಡಳಿತ ಸಮಿತಿ ಯ ಸದಸ್ಯರು, ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಪೋಷಕ ಬಂಧುಗಳು, ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here