ಸವಣೂರು ಉ.ಹಿ. ಪ್ರಾ.ಶಾಲೆಯಲ್ಲಿ ಉಮಾಪ್ರಸಾದ್ ರೈ, ದಿವಾಕರ ಬಸ್ತಿರವರಿಗೆ ಗೌರವಾರ್ಪಣೆ

0

ಪುತ್ತೂರು: ಸವಣೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ನೇ ವರುಷದ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ‌ಸುದ್ದಿ ಬಿಡುಗಡೆ ವರದಿಗಾರ ಉಮಾಪ್ರಸಾದ್ ರೈ ನಡುಬೈಲು ಮತ್ತು ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ದಿವಾಕರ ಬಸ್ತಿ ರವರುಗಳನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಶಾಲಾ ಎಸ್. ಡಿ .ಎಂ. ಸಿ‌ ಅಧ್ಯಕ್ಷ ಮಹಮ್ಮದ್ ಹನೀಫ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಸವಣೂರು ಗ್ರಾ.ಪಂ. ಸದಸ್ಯರುಗಳಾದ ಚಂದ್ರಾವತಿ ಸುಣ್ಣಾಜೆ, ಇಂದಿರಾ ಬೇರಿಕೆ, ಶಾಲಾ ಎಸ್ ಡಿಎಂಸಿ ಮಾಜಿ ಅಧ್ಯಕ್ಷ ಶಿವರಾಮ ಗೌಡ ಮೆದು, ಉಪಾಧ್ಯಕ್ಷೆ ಜಯಶ್ರೀ ಬಾರಿಕೆ ಸವಣೂರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ನಿಂಗರಾಜು ಕೆ.ಪಿ ಸ್ವಾಗತಿಸಿ, ದೈಹಿಕ ಶಿಕ್ಣಣ ಶಿಕ್ಷಕ ಬಾಲಕೃಷ್ಣ ಕೆ. ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here