ಕಾಣಿಯೂರು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಕಾಣಿಯೂರು: ದ.ಕ.ಜಿ ಪಂ.ಹಿ.ಪ್ರಾ ಕಾಣಿಯೂರು ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಪರಮೇಶ್ವರ ಅನಿಲ ಇವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ಬಳಿಕ ಮೆರವಣಿಗೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ ಅಧ್ಯಕ್ಷ ಪರಮೇಶ್ವರ ಅನಿಲರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ವಸಂತ್ ಪೆರ್ಲೋಡಿ, ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಕೂಡುರಸ್ತೆ ಇದರ‌ ಗೌರವ ಅಧ್ಯಕ್ಷರಾದ ಅವಿನಾಶ್ ಬೈತ್ತಡ್ಕ, ಶಾಲಾ ಎಸ್ ಡಿಎಂಸಿ ಉಪಾಧ್ಯಕ್ಷೆ ಯಶೋಧಾ ನೇರೋಳ್ತಡ್ಕ, ಮತ್ತು ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲ ಅಧ್ಯಕ್ಷ ರಾಜೇಶ್ ಮೀಜೆ ಮತ್ತು ಶಾಲಾ ಮುಖ್ಯ ಗುರುಗಳು ಪುಂಡಲಿಕ ಪೂಜಾರ ಉಪಸ್ಥಿತರಿದ್ದರು. ಶಿಕ್ಷಕರಾದ ದೇವಕಿ ಪಿ ಸ್ವಾಗತಿಸಿ, ಭಾರತಿ ಕೆ. ವಂದಿಸಿ ಪೂರ್ಣಿಮಾ ‌ಕೆ.ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕ ವೃಂದ ಮತ್ತು ಎಸ್ ಡಿಎಂಸಿ ಸದಸ್ಯರು, ಪೋಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here