ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

0

ನೆಲ್ಯಾಡಿ: ಜ್ಞಾನೋದಯ ಬೆಥನಿ ಪ.ಪೂ.ಕಾಲೇಜು ನೆಲ್ಯಾಡಿ ಇಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಮೈದಾನದಲ್ಲಿ ಸಂಸ್ಥೆಯ ಶಿಕ್ಷಕ-ರಕ್ಷಕ ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿಯವರು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್‌ರವರು ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಜಯಾನಂದ ಬಂಟ್ರಿಯಾಲ್‌ರವರು ನಾವೆಲ್ಲರೂ ಭಾರತೀಯರು, ನಮ್ಮಲ್ಲಿ ಯಾವ ತಾರತಮ್ಯವಿರಬಾರದೆಂದು ಹೇಳಿದರು. ಸಮೂಹ ಸಂಸ್ಥೆಗಳ ಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಸ್ಟರ್ ಇಶಾಂತ್ ಸ್ವಾಗತಿಸಿ, ಕುಮಾರಿ ಅನ್ಸಿಲೀನಾ ವಂದಿಸಿದರು. ಕುಮಾರಿ ಧನ್ವಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗ ಮನೋರಂಜನಾ ಕಾರ್ಯಕ್ರಮದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

LEAVE A REPLY

Please enter your comment!
Please enter your name here