ಮಹಾಲಿಂಗೇಶ್ವರ ಐಟಿಐಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಉದ್ಯೋಗಕ್ಕೆ ಕಾಯದೆ ಉದ್ಯೋಗದಾತರಾಗಿ – ಕೇಶವ ಅಮೈ
ಪುತ್ತೂರು: ಕೊಂಬೆಟ್ಟಿನ ಶ್ರೀ ಮಹಾಲಿಂಗೇಶ್ವರ ಐಟಿಐಯಲ್ಲಿ ಎಸ್ ಆರ್ ಕೆ ಲ್ಯಾಡರ್ಸ್ ಸಂಸ್ಥೆಯ ಸಂಸ್ಥಾಪಕರಾದ ಕೇಶವ ಅಮೈ ರವರು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
ಐಟಿಐ ವಿದ್ಯಾರ್ಥಿಗಳು ಉದ್ಯೋಗ ಅವಕಾಶಕ್ಕಾಗಿ ಕಾಯದೆ ಉದ್ಯಮಗಳನ್ನು ಸ್ಥಾಪಿಸಿ ಉದ್ಯೋಗದಾತರಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ಐಟಿಐ ನಿರ್ದೇಶಕರಾದ ಕಿಶೋರ್ ಕುಮಾರ್ ನೆಲ್ಲಿಕಟ್ಟೆ, ಜಯರಾಮ ಚಿಲ್ತಡ್ಕ, ಅಂತಾರಾಷ್ಟ್ರೀಯ ಮಟ್ಟದ ಗೋಲ್ಡ್ಮನ್ ಸಾಕ್ಸ್ ಸಂಸ್ಥೆಯ ಉಪಾಧ್ಯಕ್ಷರಾದ ಪ್ರದೀಪ್ ರಾಮಕೃಷ್ಣ ಗೌಡ, ಸಂಸ್ಥೆಯ ಸಲಹಾ ಸಮಿತಿಯ ಸದಸ್ಯರಾದ ವಿಶ್ರಾಂತ ಪ್ರಾಚಾರ್ಯ ಭವಾನಿ ಗೌಡ, ವಚನಾ ಪ್ರದೀಪ್ , ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ್ ಯಂ, ಉಪಸ್ಥಿತರಿದ್ದರು. ಪ್ರಾಚಾರ್ಯ ಪ್ರಕಾಶ್ ಪೈ ಬಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತರಬೇತಿ ಅಧಿಕಾರಿ ವಸಂತಿ ವಂದಿಸಿದರು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳು , ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here