ನೆಲ್ಯಾಡಿ-ರಾಮನಗರ: ಶಾಸ್ತಾರ ಫ್ರೆಂಡ್ಸ್ ನಿರ್ಮಾಣದ ಬಸ್ ತಂಗುದಾಣ ಉದ್ಘಾಟನೆ

0

ನೆಲ್ಯಾಡಿ: ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ ಹಾರ್ಪಳ ನೆಲ್ಯಾಡಿ ಇದರ ವತಿಯಿಂದ ನೆಲ್ಯಾಡಿ-ಬಲ್ಯ ರಸ್ತೆಯ ರಾಮನಗರದಲ್ಲಿ ಸುಮಾರು 75 ಸಾವಿರ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ತಂಗುದಾಣವನ್ನು ಆ.15ರಂದು ಉದ್ಘಾಟಿಸಲಾಯಿತು.


ಕುತ್ರಾಡಿ ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಸ್ಥಾನದ ಗೌರವಾಧ್ಯಕ್ಷ ಸೂರ್ಯನಾರಾಯಣ ಜೋಗಿತ್ತಾಯರವರು ತೆಂಗಿನಕಾಯಿ ಒಡೆದರು. ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು ಇದರ ನಿರ್ದೇಶಕ ಪ್ರವೀಣ್ ಕುಂಟ್ಯಾನ ಉದ್ಘಾಟಿಸಿ, ಶುಭಹಾರೈಸಿದರು. ಸೌತಡ್ಕದ ಉದ್ಯಮಿ ಬಾಲಕೃಷ್ಣ ನೈಮಿಷ, ಶ್ರೀ ಕ್ಷೇ.ಧ.ಗ್ರಾ.ಯೋ. ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ, ಕುತ್ರಾಡಿ ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಸ್ಥಾನದ ಅಧ್ಯಕ್ಷ ಸುಂದರ ಗೌಡ ಅತ್ರಿಜಾಲು, ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ರಾಜ್ಯಮಟ್ಟದ ಕುಣಿತ ಭಜನಾ ತರಬೇತುದಾರ ಹರೀಶ್ ನೆರಿಯಾ, ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ರವಿಪ್ರಸಾದ್ ಶೆಟ್ಟಿಯವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.

ನೆಲ್ಯಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ಪೂಜಾರಿ, ಕುತ್ರಾಡಿ ಹಾರ್ಪಳ ಶಾಸ್ತಾರ ಫ್ರೆಂಡ್ಸ್‌ನ ಅಧ್ಯಕ್ಷ ಅನಿಲ್ ರೈ ಹಾರ್ಪಳ, ಶಿವಪ್ರಸಾದ್ ದುಗ್ಗಲ, ಶಿವಪ್ರಸಾದ್ ಮೂಲೆಮನೆ ಮತ್ತಿತರರು ಉಪಸ್ಥಿತರಿದ್ದರು. ಸುರೇಶ್ ಪಡಿಪಂಡ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here