ಆತೂರು: ಬೈಕ್‌ಗೆ ಕಾರು ಡಿಕ್ಕಿ-ಕೇಸು ದಾಖಲು

0

ರಾಮಕುಂಜ: ಆ.15ರಂದು ಬೆಳಿಗ್ಗೆ ಆತೂರಿನಲ್ಲಿ ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದರೂ ಕಾರು ನಿಲ್ಲಿಸದೇ ಹೋಗಿದ್ದ ಕಾರು ಚಾಲಕನ ವಿರುದ್ಧ ಕಡಬ ಠಾಣೆಯಲ್ಲಿ ಕೇಸು ದಾಖಲಾಗಿದೆ.


ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಗಂಗಾಧರ ಯಾನೆ ಸುಧಾಕರ(೩೬ವ.)ಅವರು ಆ.15ರಂದು ಬೆಳಿಗ್ಗೆ ಮನೆಯಿಂದ ಉಪ್ಪಿನಂಗಡಿಗೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ (ಕೆಎ 21 ಜೆ 9241) ಹೋಗುತ್ತಿದ್ದ ವೇಳೆ ಆತೂರು ಅಶ್ವಿನಿ ಆಸ್ಪತ್ರೆ ಮುಂಭಾಗ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರು(ಕೆಎ19 ಎಂಜಿ 5690)ಬೈಕ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ಕೆಳಕ್ಕೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಉಪಚರಿಸಿ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಬೈಕ್‌ಗೆ ಕಾರು ಡಿಕ್ಕಿಯಾದರೂ ಕಾರು ನಿಲ್ಲಿಸದೇ ತೆರಳಿದ್ದ ಕಾರು ಚಾಲಕ ಬಳಿಕದ ಬೆಳವಣಿಗೆಯಲ್ಲಿ ಕಡಬ ಠಾಣೆಗೆ ತೆರಳಿ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದರು. ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಬೈಕ್ ಸವಾರ ಸುಧಾಕರ ಅವರು ನೀಡಿದ ದೂರಿನಂತೆ ಕಾರು ಚಾಲಕನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ :72/2023. ಕಲಂ:279.337 ಐ.ಪಿ.ಸಿ ಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here