ಫೋಟೋಗ್ರಾಫರ‍್ಸ್ ಎಸೋಸಿಯೇಶನ್‌ಗೆ ರಾಜ್ಯ ಮಟ್ಟದ ಅತ್ಯುತ್ತಮ ಸಂಘಟನಾ ಪ್ರಶಸ್ತಿ

0

ಪುತ್ತೂರು: ಕನಾಟಕ ಛಾಯಾಗ್ರಾಹಕರ ಸಂಘ ಬೆಂಗಳೂರು ಇದರ ವತಿಯಿಂದ ಛಾಯಾಗ್ರಾಹಕ ವೃತ್ತಿಯ ಅಭಿವೃದ್ಧಿ, ಹಿತಾಶಕ್ತಿಗಾಗಿ ಮತ್ತು ಸಂಘಟನೆಯ ಬೆಳವಣಿಗೆಗಾಗಿ ಸೌತ್ ಕೆನರಾ ಫೊಟೋಗ್ರಾಫರ‍್ಸ್ ಎಸೋಸಿಯೇಶನ್ ಪುತ್ತೂರು ವಲಯವು ರಾಜ್ಯ ಮಟ್ಟದ ಅತ್ಯುತ್ತಮ ಸಂಘಟನಾ ಪ್ರಶಸ್ತಿ ಪಡೆದುಕೊಂಡಿದೆ.
ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುತ್ತೂರು ವಲಯದ ಅಧ್ಯಕ್ಷ ನಾಗೇಶ್ ಟಿ.ಎಸ್ ಕೆಮ್ಮಾಯಿ ಪ್ರಶಸ್ತಿ ಸ್ವೀಕರಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಮೋದ್ ಸಾಲ್ಯಾನ್, ಗೌರವಾಧ್ಯಕ್ಷ ಹರೀಶ್ ಪುಣಚ, ಮಾಜಿ ಅಧ್ಯಕ್ಷ ಹರೀಶ್ ಎಲಿಯ, ನಿಯೋಜಿತ ಕಾರ್ಯದರ್ಶಿ ಚಂದ್ರಶೇಖರ ಉಪ್ಪಿನಂಗಡಿ ಉಪಸ್ಥಿತರಿದ್ದರು.


ಸೌತ್ ಕೆನರಾ ಫೋಟೋಗ್ರಾಫರ‍್ಸ್ ಎಸೋಸಿಯೇಶನ್ ಜಿಲ್ಲಾಧ್ಯಕ್ಷ ಆನಂದ್ ಕುಂಪಲ, ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ಪಂಜಳ, ಕೆ.ಪಿ.ಎ. ಇದರ ಸದಸ್ಯ ವಾಸುದೇವ ರಾವ್ ಉಡುಪಿ, ನವೀನ್ ಕುದ್ರೋಳಿ, ಪದ್ಮಚಂದ್ರ ಜೈನ್ ಕಾರ್ಕಳ, ಲೋಕೇಶ್ ಸುಬ್ರಹ್ಮಣ್ಯ, ಪ್ರಶಸ್ತಿ ಪ್ರದಾನ ಮಾಡಿದರು.

LEAVE A REPLY

Please enter your comment!
Please enter your name here