ಆ.21 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ

0

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.21ರಂದು ನಾಗರ ಪಂಚಮಿ ನಡೆಯಲಿದೆ.ನಾಗರ ಪಂಚಮಿಯ ಅಂಗವಾಗಿ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗದೇವರಿಗೆ ಹಾಲಿನ ಅಭಿಷೇಕ, ಸಿಯಾಳ ಅಭಿಷೇಕ ನಾಗತಂಬಿಲ ನಡೆಯಲಿದೆ.

ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದ ಬಳಿಕ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಈ ದೇವತಾ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here