ಕಾವು ಪಂಚವಟಿ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ, ಸನ್ಮಾನ

0

ಪುತ್ತೂರು: ಸಂಗಮ್ ಯುವಕ ವೃಂದ ಹಾಗೂ ರಿಕ್ಷಾ ಚಾಲಕರ ಮಾಲಕರ ಸಂಘ ಪಂಚವಟಿ ನಗರ ಕಾವು ಇದರ ಆಶ್ರಯದಲ್ಲಿ 77 ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯಿತು. ನಿವೃತ್ತ ನ್ಯಾಯಧೀಶರಾದ ಕೆ ಮನಮೋಹನ ಬನಾರಿರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಅರಿಯಡ್ಕ ಗ್ರಾಪಂ ಮಾಜಿ ಉಪಾಧ್ಯಕ್ಷ ಲೋಕೇಶ್ ಚಾಕೋಟೆ, ನಿವೃತ್ತ ಪೋಸ್ಟ್ ಮಾಸ್ಟರ್ ಸುಂದರ ನಾಯ್ಕ ಬಜಕುಡೇಲ್, ಅರಿಯಡ್ಕ ಗ್ರಾಪಂ ಸದಸ್ಯ ದಿವ್ಯನಾಥ ಶೆಟ್ಟಿ ಕಾವು, ಲಯನ್ಸ್ ಕ್ಲಬ್ ಅಧ್ಯಕ್ಷ ಪವನರಾಮ್ ಮತ್ತಿತರರು ಉಪಸ್ಥಿತರಿದ್ದರು. ಕಾವು ಆಳ್ವ ಕಾಂಪ್ಲೆಕ್ಸ್ ಮಾಲಕ ವಿಠಲ ಆಳ್ವ ಸ್ವಾಗತಿಸಿದರು. ಅರಿಯಡ್ಕ ಗ್ರಾಪಂ ಸದಸ್ಯ ಮೋನಪ್ಪ ಪೂಜಾರಿ ಕೆರೆಮಾರು ವಂದಿಸಿದರು. ಚಂದ್ರಕಿರಣ್ ಕಾವು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here