ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಪ್ರಥಮ

0

ಕಾಣಿಯೂರು: ಸರಕಾರಿ ಪ್ರೌಢಶಾಲೆ ಮಂಜುನಾಥ ನಗರ ಸವಣೂರು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಗಳಾದ ಜಿತೇಶ ಸಿ, ರೂಪೇಶ್ ರೈ ಎಂ,ಪ್ರಖ್ಯಾತ್ ಎನ್ ಸಿ,ಹಿತೇಶ್ ಎ,ತೇಜಸ್ ಕೆ ಎಲ್, ಮಹಮ್ಮದ್ ಫಾಝಿಲ್, ವಿಶಾಖ್,ಸಾತ್ವಿಕ್, ಸಚಿನ್, ಜೀವನ್,ಸನ್ವಿತ್, ನಿಹಾಲ್ ಭಾಗವಹಿಸಿದ್ದರು.ಇವರನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ , ಶಾಲಾ ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ಸಹಕರಿಸಿದರು.

LEAVE A REPLY

Please enter your comment!
Please enter your name here