ಸವಣೂರು: ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟ

0

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಹಾಗೂ ಸರಸ್ವತಿ ವಿದ್ಯಾ ಮಂದಿರ ಪುರುಷರಕಟ್ಟೆ ನರಿಮೊಗರು ಇವರ ಜಂಟಿ ಆಶ್ರಯದಲ್ಲಿ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಸರಸ್ವತಿ ಶಾಲಾ ಕ್ರೀಡಾಂಗಣದಲ್ಲಿ ಆ.18ರಂದು ಜರುಗಿತು. ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ನಿತ್ಯಾನಂದ ಪಂಜಳ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಶಾಲಾ ಸಂಚಾಲಕಅವಿನಾಶ್ ಕೊಡಂಕಿರಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಶಾಲಾ ಮುಖ್ಯ ಗುರು ದಿವ್ಯ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಆಡಳಿತಾಧಿಕಾರಿ ಶುಭಾ ಅವಿನಾಶ್, ನೋಡಲ್ ಅಧಿಕಾರಿ ಬಾಲಕೃಷ್ಣ ಸವಣೂರು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮುಖ್ಯ ಗುರು ದಿವ್ಯ ಸ್ವಾಗತಿಸಿ ಸಹ ಶಿಕ್ಷಕಿ ಶೈಲಜಾ ವಂದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಸಹ ಶಿಕ್ಷಕಿ ಶ್ರೀಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ಪಂದ್ಯಾಟದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ, ಶಾಲಾ ಸುರಕ್ಷತಾ ಸಮಿತಿಯ ಸುರೇಶ್ ಭಟ್ ಸೂರ್ಡೇಲು, ವೇದಿಕೆಯಲ್ಲಿ ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಸಹ ಶಿಕ್ಷಕರಾದ ರಾಜಾರಾಮ ನೆಲ್ಲಿತ್ತಾಯ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಎಂ ವಂದಿಸಿದರು.


ಬಹುಮಾನ ವಿಜೇತರು : ಬಾಲಕರು ಪ್ರಥಮ : ಪ್ರತಿಭಾ ಪಟ್ಟೆ, ದ್ವಿತೀಯ : ಈಡನ್ ಗ್ಲೋಬಲ್ ಬೆಳಂದೂರು.
ಬಾಲಕಿಯರು : ಪ್ರಥಮ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡೂರು, ದ್ವಿತೀಯ : ಸರಸ್ವತಿ ವಿದ್ಯಾ ಮಂದಿರ ನರಿಮೊಗರು.

LEAVE A REPLY

Please enter your comment!
Please enter your name here