ಬಲ್ಯ ದೇವಸ್ಥಾನದಿಂದ ಕಳವು

0

ಕಡಬ: ಉಪ್ಪಿನಂಗಡಿ-ಕಡಬ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿರುವ ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಿಂದ ಒಡವೆ ಹಾಗೂ ಸಿಸಿ ಕ್ಯಾಮರಾ ಕಳವಾದ ಪ್ರಕರಣ ಶುಕ್ರವಾರ ಬೆಳಿಗ್ಗೆ ಕಂಡು ಬಂದಿದೆ.


ದೇವಸ್ಥಾನದ ಅರ್ಚಕ ರವಿಪ್ರಸಾದ್ ಭಟ್ ಬೆಳಿಗ್ಗೆ ದೇವಸ್ಥಾನಕ್ಕೆ ಬಂದು ಬಾಗಿಲು ತೆರೆಯಲು ಮುಂದಾದಾಗ ದೇವಸ್ಥಾನದ ಮುಖ್ಯ ಬಾಗಿಲನ್ನು ಯಾರೋ ಕಳ್ಳರು ಬಾಗಿಲಿನ ಚಿಲಕವನ್ನು ಹಾನಿ ಮಾಡಿರುವುದು ಕಂಡು ಬಂತು, ಪರಿಶೀಲಿಸಲಾಗಿ ದೇವರ ಮೂರ್ತಿಗೆ ಹಾಕಲಾಗಿದ್ದ ಅಂದಾಜು ರೂ 35000/- ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನು ಹಾಗೂ ದೇವಸ್ಥಾನಕ್ಕೆ ಅಳವಡಿಸಿದ ಅಂದಾಜು ರೂ 36,000/- ಮೌಲ್ಯದ ಸಿ.ಸಿ ಕ್ಯಾಮರದ ಡಿ.ವಿ ಆರ್ ,ಹಾರ್ಡ್ ಡಿಸ್ಕ್ ಹಾಗೂ ಟಿ.ವಿ ಮಾನಿಟರ್ ನ್ನು ಯಾರೋ ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ರವಿಪ್ರಸಾದ್ ಭಟ್ ನೀಡಿದ ದೂರಿನಂತೆ ಕಡಬ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here