ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಪ್ರಶಸ್ತಿ ಪ್ರದಾನ

0

ಪುತ್ತೂರು:ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಒಟ್ಟು 13 ಶಾಖೆಗಳನ್ನು ಹೊಂದಿ ಯಶಸ್ವಿಯಾಗಿ ವ್ಯವಹಾರ ನಿರತವಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ,ಪುತ್ತೂರು 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಾಡಿದ ವಿಶಿಷ್ಟ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಂಘದ ಅಧ್ಯಕ್ಷರ ಪರವಾಗಿ ನಿರ್ದೇಶಕರಾದ ಜಯರಾಜ್ ಭಂಡಾರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ ಜಾಲಾಡಿ ಪ್ರಶಸ್ತಿ ಸ್ವೀಕರಿಸಿದರು.

ಆ.19ರಂದು ಎಸ್‌ಸಿಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ನಡೆದ ಮಹಾ ಸಭೆಯಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಮತ್ತು ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಿದರು.


LEAVE A REPLY

Please enter your comment!
Please enter your name here