ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಉತ್ತಮ ಸಾಧನೆಗೆ ಸಾಧನಶ್ರೀ ಪ್ರಶಸ್ತಿ

0

ಪುತ್ತೂರು: ಪುತ್ತೂರಿನಲ್ಲಿ ಪ್ರಧಾನ ಕಚೇರಿ ಹೊಂದಿದ್ದು, 9 ಶಾಖೆಗಳನ್ನು ಹೊಂದಿರುವ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಸಾಧನೆಗಾಗಿ 2ನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಶ್ರೀ ಪ್ರಶಸ್ತಿ ಪುರಸ್ಕೃತಗೊಂಡಿದೆ.


ಆ.19ರಂದು ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಸಹಕಾರಿ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ, ಒಕ್ಕಲಿಗ ಗೌಡ ಸೇವಾ ಸಂಘದ ನಿರ್ದೇಶಕ ರಾಮಕೃಷ್ಣ ಗೌಡ ಕರ್ಮಲ, ಲೋಕೇಶ್ ಚಾಕೋಟೆ, ಸತೀಶ್ ಪಾಂಬಾರು, ಆಂತರಿಕ ಲೆಕ್ಕಪರಿಶೋಧಕ ಶ್ರೀಧರ್ ಕಣಾಜಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here