ಫಿಲೋಮಿನಾ ಗಣೇಶೋತ್ಸವ 41ನೇ ವರ್ಷದ ಸಂಭ್ರಮ

0

ಆ .28 ವಿದ್ಯಾರ್ಥಿ ಮಿತ್ರರಿಂದ ಸ್ವಯಂಪ್ರೇರಿತ ರಕ್ತದಾನ

ಪುತ್ತೂರು:ಸಂತ ಫಿಲೋಮಿನಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಮಿತ್ರರಿಂದ ಪ್ರಾರಂಭಿಸಲ್ಪಟ್ಟು ವಿದ್ಯಾರ್ಥಿ ಮಿತ್ರರಿಂದಲೇ ಅದ್ದೂರಿಯಾಗಿ ಆಚರಣೆಗೊಳ್ಳುತ್ತಿರುವ ಶ್ರೀ ಗಣೇಶೋತ್ಸವಕ್ಕೆ ಇದು ಸಂಭ್ರಮದ 41ನೇ ವರುಷ.ಈ ಕಾರ್ಯಕ್ರಮದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷ ಆ.28 ರಂದು ಪುತ್ತೂರು ರೋಟರಿ ಕ್ಲಬ್ ಆಶ್ರಯದೊಂದಿಗೆ ರೋಟರಿ ಬ್ಲಡ್ ಬ್ಯಾಂಕಿನಲ್ಲಿ ವಿದ್ಯಾರ್ಥಿ ಮಿತ್ರರಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯರವರು ವಹಿಸಿಕೊಳ್ಳಲಿರುವರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಜೈರಾಜ್ ಭಂಡಾರಿ, ಸದಸ್ಯ ಎಂ.ಗಂಗಾಧರ್ ರೈ ಉಪಸ್ಥಿತಲಿರುವರು. ವಿದ್ಯಾರ್ಥಿ ಮಿತ್ರರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಶ್ರೀ ಗಣೇಶೋತ್ಸವ ಉತ್ಸವ ಸಮಿತಿ ಅಧ್ಯಕ್ಷರಾದ ವಿಕ್ರಂ ಆಳ್ವರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here