ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ, ಈಡಿಗ ಬಿಲ್ಲವ ನಾಮಧಾರಿ ರಾಷ್ಟ್ರೀಯ ಮಹಾಮಂಡಳಿಯ ತಾಲೂಕು ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

0

ಪುತ್ತೂರು:ಬಿಲ್ಲವ ಯುವ ಸಮುದಾಯದ ಮನಪರಿವರ್ತನೆಗೆ ಕರಾವಳಿ ಭಾಗದ ಪ್ರತಿ ಗ್ರಾಮದಲ್ಲೂ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ, ಈಡಿಗ ಬಿಲ್ಲವ ನಾಮಧಾರಿ ರಾಷ್ಟ್ರೀಯ ಮಹಾಮಂಡಳಿಯ ಅಧ್ಯಕ್ಷರುಗಳನ್ನು ನೇಮಿಸಲಾಗುತ್ತಿದ್ದು, ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರನ್ನಾಗಿ ನಂದಿಕೇಶ್ವರ ಎಲೆಕ್ಟ್ರಿಕಲ್ಸ್ ಮಾಲಕರಾದ ಕೇಶವ ಪೂಜಾರಿ ಬೆದ್ರಾಳ ಇವರನ್ನು ಕಲಬುರಗಿ ಮಠದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿ ಇವರು ನೇಮಕ ಮಾಡಿರುತ್ತಾರೆ.


ಕೇಶವ ಪೂಜಾರಿ ಬೆದ್ರಾಳರವರು ಕಳೆದ 23 ವರ್ಷಗಳಿಂದ ಪುತ್ತೂರು ಬಿಲ್ಲವ ಸಂಘದ ಸಕ್ರಿಯ ಸದಸ್ಯರಾಗಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿರುತ್ತಾರೆ. ಸುಮಾರು 10 ವರ್ಷಗಳ ಕಾಲ ಚಿಕ್ಕಮುಡ್ನೂರು ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾಗಿ, ಪುತ್ತೂರು ಬಿಲ್ಲವ ನಗರ ಸಮಿತಿ ಅಧ್ಯಕ್ಷರಾಗಿ, ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾಗಿ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ, ಗುರು ಮಂದಿರದ ಸದಸ್ಯರಾಗಿ, ಬಿಲ್ಲವ ಸಂಘದ ಜೊತೆ ಕಾರ್ಯದರ್ಶಿಯಾಗಿ ಮತ್ತು ಕಾರ್ಯದರ್ಶಿಯಾಗಿ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ, ಪುತ್ತೂರ್ದ ಮುತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ವಿದ್ಯುತ್ ಗುತ್ತಿಗೆದಾರರ ಸ0ಘದ ಉಪಾಧ್ಯಕ್ಷರಾಗಿ, ಸಿಡ್ಕೋ ಬ್ಯಾಂಕ್ ಇದರ ನಿರ್ದೇಶಕರಾಗಿ, ನಂದಿಕೇಶ್ವರ ಭಜನಾ ಮಂದಿರದ ಗೌರವ ಸಲಹೆಗಾರರಾಗಿ, ಪುತ್ತೂರು ನಗರ ಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಜವಾಬ್ದಾರಿ ವಹಿಸಿಕೊಂಡು ಸೇವೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here