ಕೊಯಿಲ: ಇಲಿಪಾಷಣ ಸೇವಿಸಿ ಅಸ್ವಸ್ಥರಾಗಿದ್ದ ಮಹಿಳೆ ಸಾವು

0

ರಾಮಕುಂಜ: ಇಲಿಪಾಷಣ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಕೊಯಿಲ ಗ್ರಾಮದ ಕುದ್ಲೂರು ಪಲ್ಲತ್ತಾರು ನಿವಾಸಿ ಹರೀಶ್ ಎಂಬವರ ಪತ್ನಿ ಕುಸುಮಾರವರು ಚಿಕಿತ್ಸೆಗೆ ಸ್ಪಂದಿಸದೆ ಆ.19ರಂದು ಮೃತಪಟ್ಟಿದ್ದಾರೆ.


ಮೃತ ಮಹಿಳೆ ಕುಸುಮಾರವರ ಪತಿ ಹರೀಶ್ ವಿಪರೀತ ಮದ್ಯ ವ್ಯಸನಿಯಾಗಿದ್ದು ಕುಡಿತವನ್ನು ಬಿಡುವಂತೆ ಹೇಳುತ್ತಿದ್ದರೂ ಬಿಟ್ಟಿರಲಿಲ್ಲ. ಇದರಿಂದ ಮಾನಸಿಕವಾಗಿ ನೊಂದಿದ್ದ ಕುಸುಮಾ ಅವರು ಆ.15ರಂದು ಮಧ್ಯಾಹ್ನ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದರು. ಮನೆಯವರು ಕುಸುಮಾ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಆ.19ರಂದು ಕುಸುಮಾರವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಹರೀಶ್ ಅವರ ಸಹೋದರ ಕೃಷ್ಣಪ್ಪ ಅವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here