ಉತ್ತಮ ಸಾಧನೆ: ಉಪ್ಪಿನಂಗಡಿ ಸಿಎ ಬ್ಯಾಂಕ್‌ಗೆ ಪ್ರಶಸ್ತಿ

0

ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ಉಪ್ಪಿನಂಗಡಿ ಇದರ ಉತ್ತಮ ಕಾರ್ಯ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವತಿಯಿಂದ ಸಂಘಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಪ್ಪಿನಂಗಡಿಯ ಸಹಕಾರಿ ವ್ಯವಸಾಯಿಕ ಸಂಘವು ಸತತ ನಾಲ್ಕನೇ ಬಾರಿ ಈ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿದೆ.


ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಡಾ. ಕೆ.ವಿ. ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್ ಅವರನ್ನು ಸನ್ಮಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭ ಸಂಘದ ನಿರ್ದೇಶಕ ಜಗದೀಶ್ ರಾವ್ ಮಣಿಕ್ಕಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here