ವಿಟ್ಲ: ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪುತ್ತೂರು ಬಸ್ ನಿಲ್ದಾಣದಲ್ಲಿ ಪತ್ತೆ

0

ವಿಟ್ಲ : ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು.
ವಿಟ್ಲ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಾದ ದೀಕ್ಷಿತ್ (15 ವ.)ಮತ್ತು ಗಗನ್ (14 ವ.) ನಾಪತ್ತೆಯಾಗಿ ಇದೀಗ ಪತ್ತೆಯಾದವರಾಗಿದ್ದಾರೆ.


ಆ.21ರಂದು ಬೆಳಗ್ಗೆ ಶಾಲೆಗೆಂದು ತೆರಳಿದ ವಿದ್ಯಾರ್ಥಿಗಳು ಆ ಬಳಿಕ ವಿದ್ಯಾರ್ಥಿ ನಿಲಯಕ್ಕೆ ಬಾರದೆ ನಾಪತ್ತೆಯಾಗಿದ್ದರು.ಈ ಬಗ್ಗೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ ಬಾಲಕರು ಪುತ್ತೂರಿನ ಸರಕಾರಿ ಬಸ್ ನಿಲ್ದಾಣದಲ್ಲಿರುವ ಬಗ್ಗೆ ಮಾಹಿತಿ ಅರಿತು ಅಲ್ಲಿಗೆ ತೆರಳಿ ಬಾಲಕರನ್ನು ಕರೆತಂದಿದ್ದಾರೆ. ಹಾಸ್ಟೆಲ್ ನಲ್ಲಿ ಉಳಿದುಕೊಂಡು ಶಾಲೆಗೆ ತೆರಳಲು ಆಸಕ್ತಿ ಇಲ್ಲದ ಹಿನ್ನೆಲೆಯಲ್ಲಿ ಬಾಲಕರು ಮನೆಗೆ ತೆರಳಲು ಹೋಗಿರುವುದಾಗಿ ವಿಚಾರಣೆ ವೇಳೆ ಬಾಲಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here