ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ ಪ್ರದಾನ

0

ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘವು 2022-23ನೇ ಸಾಲಿನಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆ.19ರಂದು ಡಿಸಿಸಿ ಬ್ಯಾಂಕ್ ಉತ್ಕೃಷ್ಟ ಸಹಕಾರಿ ಭವನದಲ್ಲಿ ನಡೆದ ಬ್ಯಾಂಕ್‌ನ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರವರು ಪ್ರಶಸ್ತಿ ನೀಡಿ ಗೌರವಿಸಿದರು. ಕೆದಂಬಾಡಿ ಕೆಯ್ಯೂರು ಸಿಎ ಬ್ಯಾಂಕ್‌ನ ಉಪಾಧ್ಯಕ್ಷ ಶಿವರಾಮ ಗೌಡ ಇದ್ಯಪೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ದೇರ್ಲ ಪ್ರಶಸ್ತಿ ಸ್ವೀಕರಿಸಿದರು. ಡಿಸಿಸಿ ಬ್ಯಾಂಕ್ ನಿಂದ ಸಂಘಕ್ಕೆ ದೊರೆಯುತ್ತಿರುವ 5ನೇ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಆಗಿದೆ.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕೆದಂಬಾಡಿ ಕೆಯ್ಯೂರು ಸಿಎ ಬ್ಯಾಂಕ್ ನಿರ್ದೇಶಕರಾಗಿರುವ ಎಸ್.ಬಿ.ಜಯರಾಮ ರೈ ಬಳಜ್ಜ, ಸಹಕಾರಿ ಯೂನಿಯನ್ ಜಿಲ್ಲಾ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆದಂಬಾಡಿ ಕೆಯ್ಯೂರು ಸಿಎ ಬ್ಯಾಂಕ್ ನಿರ್ದೇಶಕ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು ಸಹಿತ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here