ರಾಮಕುಂಜ: ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಆಶ್ರಯದಲ್ಲಿ ಕಡಬ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಆ.22ರಂದು ನಡೆಯಿತು.


ಎಸ್‌ಆರ್‌ಕೆ ಲ್ಯಾಡರ್‍ಸ್ ಪುತ್ತೂರು ಇದರ ಮಾಲಕ ಕೇಶವ ಎ. ಅವರು ದೀಪೋಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತ ಪಿ., ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಆಲಂಕಾರು ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣರವರು ಶುಭಹಾರೈಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಏನೆಕಲ್‌ರವರು ಪಂದ್ಯಾಟದ ಮುನ್ನೋಟವನ್ನು ತಿಳಿಸಿದರು. ವಿಶ್ರಾಂತ ಯುವಜನ ಕ್ರೀಡಾಧಿಕಾರಿ ಮಾಧವ ಬಿ.ಕೆ.,ರವರು ತೆಂಗಿನಕಾಯಿ ಒಡೆಯುವ ಮೂಲಕ ಅಂಕಣ ಉದ್ಘಾಟಿಸಿದರು. ನೋಡೆಲ್ ಅಧಿಕಾರಿ ರಾಜೇಶ್ ಕುಂತೂರು, ಕಡಬ ಸಹಶಿಕ್ಷಕ ಸಂಘದ ಕಾರ್ಯದರ್ಶಿ ದೇವಿಪ್ರಸಾದ್, ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಶಾಲಾ ಮುಖ್ಯಗುರು ಸತೀಶ್ ಭಟ್ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ವಂದಿಸಿದರು. ಶಾಲಾ ಕನ್ನಡ ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕರಾದ ವೆಂಕಟೇಶ ದಾಮ್ಲೆ ಹಾಗೂ ವಿಘ್ನೇಶ್ ಕಾರ್ಯಕ್ರಮಕ್ಕೆ ಸಹಕರಿಸಿದರು. ವಿದ್ಯಾರ್ಥಿ ಶ್ರವಣ್ ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here